ಅಧ್ಯಕ್ಷರಾಗಿದ್ದ ಆನಂದ ಪೂಜಾರಿ ಇವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಹುದ್ದೆಗೆ ಅವಿರೋಧ ಆಯ್ಕೆ

ಉಡುಪಿ: ನಗರದ ಬ್ರಹ್ಮಗಿರಿಯಲ್ಲಿರುವ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಅಧ್ಯಕ್ಷರಾಗಿದ್ದ ಆನಂದ ಪೂಜಾರಿ ಇವರ ಅಕಾಲಿಕ ನಿಧನದಿಂದಾಗಿ ತೆರವಾಗಿದ್ದ ಹುದ್ದೆಗೆ ಮೇ 26 ರಂದು ಚುನಾವಣೆ ನಿಗದಿಯಾಗಿತ್ತು. ರೆನೋಲ್ಡ್ ಪ್ರವೀಣ್ ಕುಮಾರ್ ಇವರು ಪ್ರಸ್ತುತ ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿದ್ದು, ಈ ಹಿಂದೆ ಉಡುಪಿ ನಗರಸಭೆಯ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
“ನೀವು ತಪ್ಪಿಸಿಕೊಂಡಿರಬಹುದಾದ ಆಯ್ದ ಸುದ್ದಿಗಳು.”